Cini NewsSandalwood

ಈ ವಾರ “ಪ್ರಕರಣ ತನಿಖಾ ಹಂತದಲ್ಲಿದೆ” ಚಿತ್ರ ಬಿಡುಗಡೆ

ಈಗಾಗಲೇ ತಮ್ಮ ಚಿತ್ರದ ಶೀರ್ಷಿಕೆಯ ಮೂಲಕವೇ ಬಹಳಷ್ಟು ಕುತೂಹಲವನ್ನು ಮಾಡಿಸಿರುವಂತಹ ಯುವ ಪಡೆಗಳ `ಪ್ರಕರಣ ತನಿಖಾ ಹಂತದಲ್ಲಿದೆ’. ಸುಂದರ್ .ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಮೂಲಕವೇ ಭಿನ್ನ ಕಥಾನಕದ ಸುಳಿವು ಬಿಟ್ಟು ಕೊಟ್ಟಿದ್ದ `ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಈ ವಾರ ಅಂದರೆ, ಅಕ್ಟೋಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

ಶೀರ್ಷಿಕೆ ಕೇಳಿದಾಕ್ಷಣವೇ ಒಟ್ಟಾರೆ ಕಥೆಯ ಬಗ್ಗೆ ಒಂದು ಕಲ್ಪನೆ ಮೂಡಿಸಿಕೊಂಡಿದ್ದ ಪ್ರೇಕ್ಷಕರನ್ನೆಲ್ಲ ಟ್ರೈಲರ್ ಅಚ್ಚರಿಗೀಡುಮಾಡಿತ್ತು. ಹಾಗೆ ಮೂಡಿಕೊಂಡಿದ್ದ ನಿರೀಕ್ಷೆಗಳ ನಡುವೆ ಈ 95 ನಿಮಿಷಗಳ ವಿಶಿಷ್ಟ ಥ್ರಿಲ್ಲರ್ ತೆರೆಗಾಣಲು ದಿನಗಣನೆ ಶುರುವಾಗಿದೆ.

ವಿಶೇಷವೆಂದರೆ, ರಂಗಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಪಳಗಿಕೊಂಡಿದ್ದವರೆಲ್ಲ ಸೇರಿ ಈ ಚಿತ್ರವನ್ನು ರೂಪಿಸಿದ್ದಾರೆ. ರಂಗಭೂಮಿಯ ವಾತಾವರಣದಲ್ಲಿಯೇ ಜೀವ ಪಡೆದಿದ್ದ ಈ ಚಿತ್ರವನ್ನು ಚಿಂತನ್ ಕಂಬಣ್ಣ ನಿರ್ಮಾಣ ಮಾಡಿದ್ದಾರೆ.ಹೊಸತೇನನ್ನೋ ಸೃಷ್ಟಿಸಬೇಕೆಂಬ ತುಡಿತದೊಂದಿಗೆ ತಯಾರಾಗಿರುವ ಈ ಚಿತ್ರ ಈಗಾಗಲೇ ಟೈಟಲ್ ಟ್ರ್ಯಾಕ್, ಪೋಸ್ಟರ್, ಟ್ರೈಲರ್ ಮುಂತಾದವುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ.

ಶೀರ್ಷಿಕೆಯೇ ಇದೊಂದು ಕ್ರೈಂ ಜಾನರಿನ ಚಿತ್ರವೆಂಬಂತೆ ಸೂಚಿಸುವುದು ಸತ್ಯ. ಆದರೆ, ಅದೆಲ್ಲದರಾಚೆಗಿನ ಬೆರಗುಗಳನ್ನು 95ನಿಮಿಷಗಳ ಈ ಥ್ರಿಲ್ಲರ್ ಸಿನಿಮಾ ಬಚ್ಚಿಟ್ಟುಕೊಂಡಿದೆ ಎಂಬ ಭರವಸೆ ಚಿತ್ರ ತಂಡದಲ್ಲಿದೆ.

ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಮಹೀನ್ ಕುಬೇರ್ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ ಛಾಯಾಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

ವಿ ಎಫ್ ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ನಿಭಾಯಿಸಿದ್ದಾರೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣ ಈ ವಾರವೇ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

error: Content is protected !!