Cini NewsSandalwood

“KMH ಕಪ್ “ ಕ್ರಿಕೆಟ್ ಟೂರ್ನಿಯ ಲೋಗೋ ಲಾಂಚ್ ಮಾಡಿದ ರಾಯಭಾರಿ ಭಾವನ ರಾಮಣ್ಣ.

ಚಂದನವನದಲ್ಲಿ ವರ್ಣಾಲಂಕಾರ ಹಾಗೂ ಕೇಶಾಲಂಕಾರ ಸೇವೆ ನಿರಂತರವಾಗಿ ಸಾಗುತ್ತಾ ಬಂದಿದ್ದು , ಬಹಳಷ್ಟು ಹಿರಿಯರು ಕಟ್ಟಿ ಬೆಳೆಸಿರುವ ಸಂಘವು ಸುಧೀರ್ಘ 35 ವರ್ಷಗಳ ಕಾಲ ತೆರೆ ಹಿಂದೆ ದುಡಿಯುತ್ತಾ ಬಂದಿದೆ. ಈಗ ಈ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ ” ಕೆ ಎಂ. ಹೆಚ್ ಕಪ್ ” ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನ ರಾಮಣ್ಣ ಲೋಗೊ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡರಾದ ದಿನೇಶ್, ಸಂಘದ ಅಧ್ಯಕ್ಷರಾದ ಎಸ್. ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಾಗೆಯೇ ಸಂಘದ ಪದಾಧಿಕಾರಿಗಳು ಅಂಗ ಸಂಸ್ಥೆಯ ಮುಖಂಡರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಹಾಜರಿದ್ದು ಹಾಜರಿದಿದ್ದು ವಿಶೇಷ.

ಇನ್ನು ಈ ಕ್ರಿಕೆಟ್ ಟೂರ್ನಿಯಾ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರಾದ ಬಾಬು ಧರ್ಮೇಂದ್ರ ಮಾತನಾಡುತ್ತಾ ಇದು ನಮ್ಮ ಪ್ರಪ್ರಥಮ ಪತ್ರಿಕಾಗೋಷ್ಠಿ ನಮ್ಮ
ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ.

ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ “ಕೆ ಎಂ ಹೆಚ್ ಕಪ್” ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜೊತೆಯಿರುವ ನಟಿ ಭಾವನ ರಾಮಣ್ಣ ಈ ಟೂರ್ನಿಯ ರಾಯಭಾರಿ ಯಾಗಿದ್ದಾರೆ. ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್ ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಬೆ 8 ರಿಂದ ರಾತ್ರಿ 8 ವರೆಗೂ ಪಂದ್ಯಗಳು ನಡೆಯುತ್ತದೆ.

ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24, 999 ರೂಪಾಯಿ ಬಹುಮಾನ ನೀಡಲಾಗುವುದು. ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತುಸಾವಿರ ಪ್ರವೇಶದರವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ. ಬಹಳ ಅಚ್ಚುಕಟ್ಟಾಗಿ ಈ ಕ್ರಿಕೆಟ್ ಟೂರ್ನಿಯನ್ನ ನಡೆಸಲು ನಮ್ಮ ತಂಡ ಸಜ್ಜಾಗುತ್ತಿದೆ ಎಂದರು.

ಇನ್ನು ಈ ಕ್ರಿಕೆಟ್ ಟೂರ್ನಿಯಾ ರಾಯಭಾರಿ ಆಗಿರುವ ಭಾವನಾ ರಾಮಣ್ಣ ಮಾತನಾಡುತ್ತಾ ತಮ್ಮ ಮೊದಲ ಚಿತ್ರಕ್ಕೆ ಮೇಕಪ್ ಮಾಡಿದ ವೆಂಕಟೇಶ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ನಟಿ ಭಾವನ ರಾಮಣ್ಣ, ನಾನು ನಟಿಸುವ ಎಲ್ಲಾ ಚಿತ್ರಗಳ ನಿರ್ಮಾಪಕರಿಗೆ ಹೇಳುವುದು ಮೇಕಪ್ ಹಾಗೂ ಕೇಶಾಲಂಕಾರಕ್ಕೆ ಈ ಸಂಘದ ಸದಸ್ಯರನ್ನೇ ಚಿತ್ರಗಳಲ್ಲಿ ಬಳಸಿಕೊಳ್ಳಿ. ಈಗ ಸಾಕಷ್ಟು ಜನ‌ರು ಸಮಾಜಿಕ ಜಾಲತಾಣಗಳಲ್ಲಿ ಮೇಕಪ್ ಕುರಿತು ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅದರಿಂದ ಇವರಿಗೆ ಸ್ವಲ್ಪ ತೊಂದರೆಯಾಗುತ್ತಿದೆ‌.

ಇನ್ನು ಈ ಸಂಘಕ್ಕೆ ಸದಾ ನನ್ನ ಬೆಂಬಲ ಇದ್ದೇ ಇರುತ್ತದೆ. ಸರ್ಕಾರದ ವತಿಯಿಂದ ಸಿಗಬೇಕಾದ ಸೌಲಭ್ಯಕ್ಕೂ ನಾನು ಇವರ ಜೊತೆ ಹೋಗಿ ಮಾತನಾಡುತ್ತೇನೆ. ಇನ್ನು ಈ ಟೂರ್ನಿಯ ಬಗ್ಗೆ ಹೇಳಬೇಕೆಂದರೆ, ನನಗೆ ಸ್ಪೋರ್ಟ್ಸ್ ಅಂದ್ರೆ ಬಹಳ ಇಷ್ಟ. ನಾನು ಕೂಡ ಚಿತ್ರೋದ್ಯಮದ ಹಲವು ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಹೋಗಿ ಸಪೋರ್ಟ್ ಮಾಡಿದ್ದೇನೆ. ಹೆಚ್ಚಾಗಿ ಕಲಾವಿದರು ಕ್ರಿಕೆಟ್ ಆಡುತ್ತೇವೆ‌. ತಂತ್ರಜ್ಞರು ಆಡುವುದು ಕಡಿಮೆ. ಕಾರ್ಮಿಕರು ಹಾಗೂ ತಂತ್ರಜ್ಞರಿಗಾಗಿ ಆಯೋಜಿಸಿರುವ ಈ ಕ್ರಿಕೆಟ್ ಟೂರ್ನಿಯ ರಾಯಭಾರಿಯಾಗಿದ್ದು ಖುಷಿಯಾಗಿದೆ. ಟೂರ್ನಿ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ದಿನೇಶ್ ಮಾತನಾಡುತ್ತ ಈ ಸಂಘದ ಅಧ್ಯಕ್ಷರು , ಪದಾಧಿಕಾರಿಗಳು ನನಗೆ ಬಹಳಷ್ಟು ಆತ್ಮೀಯರು. ಕಾರ್ಮಿಕರಿಗೆ ಹಾಗೂ ತಂತ್ರಜ್ಞರಿಗೆ ಆಯೋಜಿಸಿರುವ ಈ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಲಿ. ನನ್ನ ಸಪೋರ್ಟ್ ಸದಾ ಇವರೊಟ್ಟಿಗೆ ಇರುತ್ತೆ ಎಂದು ಶುಭ ಕೋರಿದರು. ಇನ್ನು ಇಡೀ ಕಾರ್ಯಕ್ರಮವನ್ನು ಸಂಘದ ಕಚೇರಿಯಲ್ಲಿ ಆಯೋಜನೆ ಮಾಡಿದ್ದು , ಸಂಘದ ಅಧ್ಯಕ್ಷರು , ಪದಾಧಿಕಾರಿಗಳು ಹಾಗೂ ಸದಸ್ಯರು ಎಲ್ಲರ ಒಗ್ಗಟ್ಟು ಗಮನ ಸೆಳೆಯುವಂತಿತ್ತು

error: Content is protected !!