Cini NewsSandalwood

ನವೆಂಬರ್ 22ಕ್ಕೆ “ಮರ್ಯಾದೆ ಪ್ರಶ್ನೆ” ಚಿತ್ರ ರಿಲೀಸ್

ಚಂದನವನಕ್ಕೆ ಉತ್ಸಾಹಿ ಗೆಳೆಯರ ಬಳಗ ಸೇರಿಕೊಂಡು ಒಂದು ವಿಭಿನ್ನ ಕಥಾನಕ ಚಿತ್ರಗಳನ್ನು ನಿರಂತರವಾಗಿ ನೀಡಲು ಮುಂದಾಗಿದೆ. ಈಗಾಗಲೇ ಒಂದಷ್ಟು ಹೊಸ ಕಥೆಯ ಕಂಟೆಂಟ್‌ಗಳು ಹಾಗೂ ನಿರೂಪಣೆಯಲ್ಲಿ ಹೊಸತನವಿರುವ ಸಿನಿಮಾಗಳು ಹೆಚ್ಚು ಗಮನ ಸೆಳೆಯುತ್ತಿವೆ.

ಆ ಸಾಲಿಗೆ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಕೂಡ ಸೇರುವಂತಿದೆ. ಈಗಾಗಲೇ ಇದು ವಿಭಿನ್ನ ಶೀರ್ಷಿಕೆ ಮೂಲಕ ಸದ್ದು ಮಾಡಿದೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಮರ್ಯಾದೆ ಪ್ರಶ್ನೆ ಸಿನಿಮಾ ತೆರೆಗೆ ಬರೋದಿಕ್ಕೆ ಮುಹೂರ್ತ ನಿಗದಿಯಾಗಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್, ನಿರ್ದೇಶಕ ನಾಗರಾಜ್ ಸೋಮಯಾಜಿ ಸೇರಿದಂತೆ ಇಡೀ ತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಹಳ ಉತ್ಸುಕತೆಯಿಂದ ತಮ್ಮ ಕನಸ್ಸನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸಲು ಕಾತರದಿಂದ ಸುದ್ದಿಗೋಷ್ಠಿಗೆ ಹಾಜರಾಗಿತ್ತು.

ಮೊದಲಿಗೆ ಪತ್ರಿಕೋದ್ಯಯಲ್ಲಿ ನಿರ್ಮಾಪಕ ಆರ್.ಜೆ. ಪ್ರಾದೀಪಾ ಮಾತನಾಡುತ್ತಾ ನಾನು ಖ್ಯಾತ ನಟ, ನಿರ್ದೇಶಕ ಶಂಕರ್ ನಾಗ್ ರವರ ಸಂಕೇತ್ ಸ್ಟುಡಿಯೋ ಕನ್ನಡ ಚಿತ್ರರಂಗಕ್ಕೆ ಒಂದು ಮಾದರಿ , ಬಹಳಷ್ಟು ಹೊಸ ಪ್ರತಿಭೆ, ವಿಭಿನ್ನ ಕಥಾನಕ ಚಿತ್ರಗಳಿಗೆ ನಾಂದಿಯಾಗಿತ್ತು. ಆ ಮಾದರಿಲೇ ನಮ್ಮ ಸಕ್ಕತ್ ಸ್ಟುಡಿಯೋ ಕೂಡ ಬೆಳೆಯಬೇಕೆಂಬ ಮಹಾದಾಸೆ. ನಾನು ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು. ಹೀಗೆ ಶುರುವಾದ ಜರ್ನಿ ನಾವು ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ. ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ನಿಮ್ಮೆಲ್ಲರ ಪ್ರೀತಿ ಸಹಕಾರ ನಮ್ಮ ತಂಡದ ಮೇಲೆ ಇರಲಿ. ನವೆಂಬರ್ 22ಕ್ಕೆ ಬರುತ್ತಿದ್ದೇವೆ ಎಲ್ಲರೂ ಚಿತ್ರವನ್ನು ನೋಡಿ ಹರಿಸಿ ಎಂದು ಕೇಳಿಕೊಂಡರು.

ಇನ್ನು ಈ ಚಿತ್ರದ ನಿರ್ದೇಶಕ ನಾಗರಾಜ್ ಸೋಮಯಾಜಿ ಮಾತನಾಡಿ, ನಾನು ಪ್ರದೀಪ್ ಕ್ಲೋಸ್ ಫ್ರೆಂಡ್ಸ್. ಅದ್ಭುತ ತಾರಾಬಳಗ, ಪ್ರೇಕ್ಷಕರಿಗೆ ಇಷ್ಟವಾಗುವ ನೈಜತೆ ಇರುವ ಸಿನಿಮಾ ಮಾಡಿದ್ದೇವೆ. ತಾರಾಬಳಗದ ಜೊತೆಗೆ ನಮ್ ಟೆಕ್ನಿಕಲ್ ಟೀಂ ಕೂಡ ಸ್ಟ್ರಾಂಗ್ ಆಗಿದೆ. ಈ ಸಿನಿಮಾ ಜನಕ್ಕೆ ತಲುಪಿಸಲು ನಿಮ್ಮ ಪ್ರೀತಿ ಬೇಕು. ನಮ್ಮ ಚಿತ್ರದಲ್ಲಿ ಕಥೆಗೆ ಪೂರಕವಾದ ಪಾತ್ರಗಳು ಜೀವಿಸಿದ್ದಾರೆ. ಇದು ಎಲ್ಲಾ ವರ್ಗದವರಿಗೂ ಇಷ್ಟವಾಗುವಂತ ಕಥೆ ಒಳಗೊಂಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ. ನವಂಬರ್ 22ಕ್ಕೆ ಚಿತ್ರ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದ್ದೇವೆ. ನಿಮ್ಮೆಲ್ಲರ ಸಪೋರ್ಟ್ ಇರಲಿ ಎಂದು ಕೇಳಿಕೊಂಡರು.

ನವೆಂಬರ್ 22ಕ್ಕೆ ಮರ್ಯಾದೆ ಪ್ರಶ್ನೆ ರಿಲೀಸ್ ಒಂದು ಯಶಸ್ವಿ ಚಿತ್ರ ಯಾವ್ಯಾವ ಸ್ವರೂಪದಲ್ಲಿ ಪ್ರೇಕ್ಷಕರ ಗಮನ ಸೆಳೆಯುತ್ತದೆಯೋ ಆ ಎಲ್ಲಾ ರೀತಿಯಿಂದಲೂ ಸದ್ದು ಮಾಡುತ್ತಾ ಸಾಗುತ್ತಿರುವ ಫ್ಯಾಮಿಲಿ ಎಂಟರ್ ಟೈನರ್ ಮರ್ಯಾದೆ ಪ್ರಶ್ನೆ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗ್ತಿದೆ. ಆಕರ್ಷಕ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಣೆ ಮಾಡಿದೆ. ಚಿತ್ರದ ಪೋಸ್ಟರ್ ಇದೊಂದು ಫ್ಯಾಮಿಲಿ ಕುಳಿತು ನೋಡುವ ಸಿನಿಮಾ ಅನ್ನೋದನ್ನು ಹೇಳ್ತಿದೆ. ರಾಜ್ಯ ಮಾತ್ರವಲ್ಲ ಹೈದ್ರಾಬಾದ್, ಚೆನ್ನೈ, ಹೀಗೆ ಬೇರೆ ರಾಜ್ಯಗಳ ಜೊತೆಗೆ ವಿದೇಶದಲ್ಲಿಯೂ ಮರ್ಯಾದೆ ಪ್ರಶ್ನೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಈ ‘ಮರ್ಯಾದೆ ಪ್ರಶ್ನೆ’ ಸಿನಿಮಾ ದಲ್ಲಿ ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌ ಶೆಟ್ಟಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ನಾಗೇಂದ್ರ ಶಾ , ಶ್ರವಣ್‌ ಸೇರಿದಂತೆ ತಾಂತ್ರಿಕ ವರ್ಗದವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಇನ್ನು ಈ ಚಿತ್ರದಲ್ಲಿ ತೇಜು ಬೆಳವಾಡಿ, ರೇಖಾ ಕೂಡ್ಲಿಗಿ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದು, ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸಿ , ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಬಹಳಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿರುವ ಈ ಚಿತ್ರ ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

error: Content is protected !!